4:15 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ

01/04/2024, 17:59

ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದು ಹೇಳಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. ಇತರ ಸಮಯದಲ್ಲೂ ಎಲ್ಲಾ ಪ್ರಾರ್ಥನಾ ಕೇಂದ್ರಗಳಿಗೆ ತೆರಳುವ ಸಂಪ್ರದಾಯ ಬೆಳೆಸಿಕೊಂಡವನು ನಾನು. ಈ ಚುನಾವಣೆಯ ಮೂಲಕ ಎಲ್ಲಾ ಜನರ ಸೇವೆ ಮಾಡುವ ಭಾಗ್ಯ ಸಿಗುವಂತಾಗಲಿ ಎಂದರು.
ಮಸೀದಿ ಸಮಿತಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಮಾತನಾಡಿ, ಉತ್ತಮ ಅಭ್ಯರ್ಥಿ ನಮಗೆ ಲಭಿಸಿದ್ದಾರೆ. ಜಾತಿ, ಮತ, ಬೇಧ ನೋಡದೇ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಕಾರ್ಯದರ್ಶಿ ಯಕೂಬ್ ಖಾನ್, ನೂರುದ್ದೀನ್ ಸಾಲ್ಮಾರ, ಹಸನ್ ಹಾಜಿ, ಶಕೂರ್ ಹಾಜಿ, ಎಂ.ಎಸ್. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು