11:16 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಡವರಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳು ಸತಾಯಿಸುತ್ತಿವೆ; ಸೂಟು-ಬೂಟಿಗೆ ಕೈಬೀಸಿ ಕೊಡುತ್ತಿವೆ!!

07/03/2022, 22:24

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ. ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್‌ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡುತ್ತವೆ .10-20 ಸಾವಿರ ರೂ  ಸಾಲ ಪಡೆದವರ ಮನೆ ಹರಾಜು ಹಾಕುವ ದೇಶದ ಪರಿಸ್ಥಿತಿ ಬದಲಾಯಿಸ ಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .

ಪಟ್ಟಣದ ರಾಜಧಾನಿ ಮಂಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಶ್ರೀನಿವಾಸಪುರ ಶಾಖೆ , ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ 102 ಮಹಿಳಾ ಸಂಘಗಳಿಗೆ 5.2 ಕೋಟಿ ರೂ ಸಾಲ ವಿತರಿಸಿ ಮಾತನಾಡಿ , ಸತತ 8 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತಿದೆ . 

ಹಿಂದೆ 35 ಸಾವಿರ ರೂ ಇದ್ದ ಸಾಲವನ್ನು ನಂತರ 50 ಸಾವಿರ ರೂ.ಗೆ ಏರಿಸಿ ಶೂನ್ಯ ಬಡ್ಡಿಯಲ್ಲಿ ಕೊಡಲಾಗುತ್ತದೆ. ಸಾಲ ಕೊಡುವಾಗ ನಿಮ್ಮನ್ನು ಬ್ಯಾಂಕ್ ಗೌರದಿಂದ ಕಾಣುತ್ತದೆ. ಹಾಗಾಗಿ ಪಡೆದ ಸಾಲ ಸಕಾಲಕ್ಕೆ ಪಾವತಿ ಮಾಡಿದಲ್ಲಿ ಇತರರಿಗೆ ಸಾಲ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಎಂ ಎಲ್‌ ಸಿ ಎಂ.ಎಲ್.ಅನಿಲ್ ಕುಮಾರ್ , ಕಸಬಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಆಲಂಬಗಿರಿ ಅಯ್ಯಪ್ಪ , ಉಪಾಧ್ಯಕ್ಷೆ ಶಾಂತಮ್ಮ ,ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿರ್ದೇಶಕರಾದ ಶಬೀರ್ ಅಹ್ಮದ್ ,ದ್ವಾರಸಂದ್ರ , ನಾರಾಯಣಸ್ವಾಮಿ , ಮುನಿ ವೆಂಕಟಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ವಿ. ವೆಂಕಟರೆಡ್ಡಿ , ಎಸ್.ವಿ.ಸುಧಾಕರ್‌ , ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಧ್ಯಕ್ಷ ದಿಂಬಾಲ್ – ಅಶೋಕ್ ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಚರ್  ಅಕ್ಬರ್ ಷರೀಫ್ ,  ಪುರಸಭೆ ಸದಸ್ಯರಾದ ಕೆ. ಅನೀಸ್ ಅಹಮದ್ , ಇಪ್ತಿಕಾರ್ ಅಹ್ಮದ್ , ಕೊಂಡಸಂದ್ರ ಶಿವಾರೆಡ್ಡಿ , ಲಕ್ಷ್ಮಣರೆಡ್ಡಿ ಇತರರು  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು