1:16 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಬಡವರಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳು ಸತಾಯಿಸುತ್ತಿವೆ; ಸೂಟು-ಬೂಟಿಗೆ ಕೈಬೀಸಿ ಕೊಡುತ್ತಿವೆ!!

07/03/2022, 22:24

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ. ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್‌ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡುತ್ತವೆ .10-20 ಸಾವಿರ ರೂ  ಸಾಲ ಪಡೆದವರ ಮನೆ ಹರಾಜು ಹಾಕುವ ದೇಶದ ಪರಿಸ್ಥಿತಿ ಬದಲಾಯಿಸ ಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .

ಪಟ್ಟಣದ ರಾಜಧಾನಿ ಮಂಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಶ್ರೀನಿವಾಸಪುರ ಶಾಖೆ , ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ 102 ಮಹಿಳಾ ಸಂಘಗಳಿಗೆ 5.2 ಕೋಟಿ ರೂ ಸಾಲ ವಿತರಿಸಿ ಮಾತನಾಡಿ , ಸತತ 8 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತಿದೆ . 

ಹಿಂದೆ 35 ಸಾವಿರ ರೂ ಇದ್ದ ಸಾಲವನ್ನು ನಂತರ 50 ಸಾವಿರ ರೂ.ಗೆ ಏರಿಸಿ ಶೂನ್ಯ ಬಡ್ಡಿಯಲ್ಲಿ ಕೊಡಲಾಗುತ್ತದೆ. ಸಾಲ ಕೊಡುವಾಗ ನಿಮ್ಮನ್ನು ಬ್ಯಾಂಕ್ ಗೌರದಿಂದ ಕಾಣುತ್ತದೆ. ಹಾಗಾಗಿ ಪಡೆದ ಸಾಲ ಸಕಾಲಕ್ಕೆ ಪಾವತಿ ಮಾಡಿದಲ್ಲಿ ಇತರರಿಗೆ ಸಾಲ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಎಂ ಎಲ್‌ ಸಿ ಎಂ.ಎಲ್.ಅನಿಲ್ ಕುಮಾರ್ , ಕಸಬಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಆಲಂಬಗಿರಿ ಅಯ್ಯಪ್ಪ , ಉಪಾಧ್ಯಕ್ಷೆ ಶಾಂತಮ್ಮ ,ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿರ್ದೇಶಕರಾದ ಶಬೀರ್ ಅಹ್ಮದ್ ,ದ್ವಾರಸಂದ್ರ , ನಾರಾಯಣಸ್ವಾಮಿ , ಮುನಿ ವೆಂಕಟಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ವಿ. ವೆಂಕಟರೆಡ್ಡಿ , ಎಸ್.ವಿ.ಸುಧಾಕರ್‌ , ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಧ್ಯಕ್ಷ ದಿಂಬಾಲ್ – ಅಶೋಕ್ ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಚರ್  ಅಕ್ಬರ್ ಷರೀಫ್ ,  ಪುರಸಭೆ ಸದಸ್ಯರಾದ ಕೆ. ಅನೀಸ್ ಅಹಮದ್ , ಇಪ್ತಿಕಾರ್ ಅಹ್ಮದ್ , ಕೊಂಡಸಂದ್ರ ಶಿವಾರೆಡ್ಡಿ , ಲಕ್ಷ್ಮಣರೆಡ್ಡಿ ಇತರರು  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು