6:00 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬಡವರಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳು ಸತಾಯಿಸುತ್ತಿವೆ; ಸೂಟು-ಬೂಟಿಗೆ ಕೈಬೀಸಿ ಕೊಡುತ್ತಿವೆ!!

07/03/2022, 22:24

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ. ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್‌ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡುತ್ತವೆ .10-20 ಸಾವಿರ ರೂ  ಸಾಲ ಪಡೆದವರ ಮನೆ ಹರಾಜು ಹಾಕುವ ದೇಶದ ಪರಿಸ್ಥಿತಿ ಬದಲಾಯಿಸ ಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .

ಪಟ್ಟಣದ ರಾಜಧಾನಿ ಮಂಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಶ್ರೀನಿವಾಸಪುರ ಶಾಖೆ , ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ 102 ಮಹಿಳಾ ಸಂಘಗಳಿಗೆ 5.2 ಕೋಟಿ ರೂ ಸಾಲ ವಿತರಿಸಿ ಮಾತನಾಡಿ , ಸತತ 8 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತಿದೆ . 

ಹಿಂದೆ 35 ಸಾವಿರ ರೂ ಇದ್ದ ಸಾಲವನ್ನು ನಂತರ 50 ಸಾವಿರ ರೂ.ಗೆ ಏರಿಸಿ ಶೂನ್ಯ ಬಡ್ಡಿಯಲ್ಲಿ ಕೊಡಲಾಗುತ್ತದೆ. ಸಾಲ ಕೊಡುವಾಗ ನಿಮ್ಮನ್ನು ಬ್ಯಾಂಕ್ ಗೌರದಿಂದ ಕಾಣುತ್ತದೆ. ಹಾಗಾಗಿ ಪಡೆದ ಸಾಲ ಸಕಾಲಕ್ಕೆ ಪಾವತಿ ಮಾಡಿದಲ್ಲಿ ಇತರರಿಗೆ ಸಾಲ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಎಂ ಎಲ್‌ ಸಿ ಎಂ.ಎಲ್.ಅನಿಲ್ ಕುಮಾರ್ , ಕಸಬಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಆಲಂಬಗಿರಿ ಅಯ್ಯಪ್ಪ , ಉಪಾಧ್ಯಕ್ಷೆ ಶಾಂತಮ್ಮ ,ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿರ್ದೇಶಕರಾದ ಶಬೀರ್ ಅಹ್ಮದ್ ,ದ್ವಾರಸಂದ್ರ , ನಾರಾಯಣಸ್ವಾಮಿ , ಮುನಿ ವೆಂಕಟಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ವಿ. ವೆಂಕಟರೆಡ್ಡಿ , ಎಸ್.ವಿ.ಸುಧಾಕರ್‌ , ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಧ್ಯಕ್ಷ ದಿಂಬಾಲ್ – ಅಶೋಕ್ ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಚರ್  ಅಕ್ಬರ್ ಷರೀಫ್ ,  ಪುರಸಭೆ ಸದಸ್ಯರಾದ ಕೆ. ಅನೀಸ್ ಅಹಮದ್ , ಇಪ್ತಿಕಾರ್ ಅಹ್ಮದ್ , ಕೊಂಡಸಂದ್ರ ಶಿವಾರೆಡ್ಡಿ , ಲಕ್ಷ್ಮಣರೆಡ್ಡಿ ಇತರರು  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು