7:36 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಡವರು ಉಣ್ಣುವ ಪಡಿತರ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಎಗ್ಗಿಲ್ಲದೆ ಸಾಗಾಟ; ಅಧಿಕಾರಿಗಳು ಶಾಮೀಲು?

25/03/2022, 19:38

ಬೆಳಗಾವಿ(reporterkarnataka.com): ಬೆಳಗಾವಿಯ ಹುಕ್ಕೇರಿ ತಾಲೂಕಿನಿಂದ ಪಡಿತರ ಅಕ್ಕಿಯನ್ನು ನಿಪ್ಪಾಣಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ ಮಾಡುವುದು ಮತ್ತೆ ಬೆಳಕಿಗೆ ಬಂದಿದ್ದು, ಅಕ್ರಮವನ್ನು ವೀಡಿಯೊ ಮಾಡಲೆತ್ನಿಸಿದವರ ಮೇಲೆ ಕಾರು ಹಾಯಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ.

ಮಹಾರಾಷ್ಟ್ರ ನೋಂದಣಿ ಹೊಂದಿರುವ ಒಮಿನಿ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಹುಕ್ಕೇರಿ ತಾಲ್ಲೂಕಿನ ಕನಗಲಾ ಗ್ರಾಮದಿಂದ ಅಕ್ಕಿ ತುಂಬಿಕೊಂಡು ನಿಪ್ಪಾಣಿ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು. ಇದನ್ನು ವಿಡಿಯೋ ಮಾಡಲು ಹೋದ ಪತ್ರಕರ್ತರ ಮೇಲೆ ಕಾರು ಹರಿಸಲು ಯತ್ನಿಸಿದ್ದಾರೆ. ಅಷ್ಟೇ ಅಲ್ಲದೆ ಅಕ್ರಮ ಅಕ್ಕಿ ಕಳ್ಳರು ದುಡ್ಡು ಕೊಟ್ಟು ಬೆಂಬಲಿಗರನ್ನು ಇಟ್ಟುಕೊಂಡು ಸುದ್ದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಬೇರೆ ಬೇರೆ ಜಿಲ್ಲೆಗಳಿಂದ ಅಕ್ರಮ ಅಕ್ಕಿ ತುಂಬಿಕೊಂಡು ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದೆ. ಅಧಿಕಾರಿಗಳು ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದೆ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ. ಹಿಂದೆ ಕೆಲವು ಜನ ಅಕ್ಕಿ ಕಳ್ಳರು ಒಬ್ಬ ಪತ್ರಕರ್ತನ ಮೇಲೆ ಹಲ್ಲೆ ಮಾಡಿ ತಮ್ಮ ಲಾರಿಯನ್ನು ತೆಗೆದುಕೊಂಡು 

ಹೋದರು. ರಾಜಾರೋಷವಾಗಿ ಅಕ್ಕಿ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಧಾರವಾಡ,
ರಾಣೆಬೆನ್ನೂರು, ಹಾವೇರಿ, ಬೆಳಗಾವಿ ಎಪಿಎಂಸಿಯಿಂದ ಅಕ್ರಮ ಅಕ್ಕಿ 
ಸಾಗಾಟವಾಗುತ್ತಿದೆ. ಇವರಿಂದ ಕೆಲವು ಪತ್ರಕರ್ತರು ತಿಂಗಳಿಗೆ ಇಂತಿಷ್ಟು ಹಣ ಪಡೆದುಕೊಂಡು ಅವರಿಗೆ ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ನಿಷ್ಠೆಯಿಂದ ಕೆಲಸ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆ. ಅಂತವರ ವಿರುದ್ದ ಕ್ರಮಕೈಗೊಳ್ಳಬೇಕೆಂದು ಮಾಧ್ಯಮದ ಮಂದಿ ಮನವಿ ಮಾಡಿದ್ದಾರೆ.


ಬೆಳಗಾವಿ ಎಪಿಎಂಸಿಯಿಂದ ದೊಡ್ಡ ಪ್ರಮಾಣದಲ್ಲಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದಾರೆ. ಇದರ ವಿರುದ್ಧ ಸೂಕ್ತವಾದ ಕ್ರಮಕೈಗೊಳ್ಳದಿದ್ದರೆ ಕೆಲವೇ ದಿನಗಳಲ್ಲಿ ಸೂಕ್ತವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.?

ಇತ್ತೀಚಿನ ಸುದ್ದಿ

ಜಾಹೀರಾತು