2:42 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬದಿಯಡ್ಕ: ಆಟೋರಿಕ್ಷಾ -ಶಾಲಾ ಬಸ್ ಭೀಕರ ಅಪಘಾತ; 5 ಮಂದಿ ಸ್ಥಳದಲ್ಲಿಯೇ ದಾರುಣ ಸಾವು

26/09/2023, 00:46

ಕಾಸರಗೋಡು(reporterkarnataka.com)::ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ 5 ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ರಿಕ್ಷಾದ ಡ್ರೈವರ್, ಒಬ್ಬ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಅನತಿ ದೂರದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಮೃತರ ಪರಿಚಯ ಸ್ಥಳದಲ್ಲಿ ಇದ್ದವರಿಗೆ ಮಾಹಿತಿ ಲಭಿಸಿಲ್ಲವಾದ್ದರಿಂದ ಗುರುತು ಪತ್ತೆ ಹಚ್ಚಲು ಗಂಟೆಗಳಷ್ಟು ಕಾಲ ಪರದಾಡಬೇಕಾಯಿತು. ಮೃತದೇಹವನ್ನು‌ ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು