1:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬದಿಯಡ್ಕ: ಮೃತಪಟ್ಟಿದ್ದಾರೆಂದು ವೈದ್ಯರು ಬಿಟ್ಟುಕೊಟ್ಟ ವ್ಯಕ್ತಿ ದಾರಿ ಮಧ್ಯದಲ್ಲಿ ಜೀವಂತವಾಗಿ ಉಸಿರಾಡಿದರು!

21/01/2022, 09:13

ಮಂಗಳೂರು(reporterkarnataka.com): ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ.

ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​ ಮಾಡಿ, ಅಂತ್ಯಸಂಸ್ಕಾರಕ್ಕೆ ತಯಾರಿ ಮಾಡುವಂತೆ ಸೂಚಿಸಿದ್ದು, ಅದರಂತೆಯೇ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸುತ್ತಿದ್ದರು.

ಮಂಗಳೂರು ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುತ್ತಿದ್ದ ವೇಳೆ ಉಪ್ಪಳ ತಲುಪುತ್ತಿದ್ದಂತೆಯೇ ಗುರುವ ಅವರ ದೇಹದಲ್ಲಿ ಚಲನೆ ಕಂಡುಬಂದಿದ್ದು, ಉಸಿರಾಡಲು ಆರಂಭಿಸಿದ್ದರು. ತಕ್ಷಣವೇ ರೋಗಿಯನ್ನು ಬದಿಯಡ್ಕದ ಕ್ಲಿನಿಕ್​ಗೆ ಕರೆದೊಯ್ದಿದ್ದು ಗುರುವ ಜೀವಂತವಾಗಿ ಇದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಬಳಿಕ ಅಲ್ಲಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು