5:04 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬದಿಯಡ್ಕ: ಮೃತಪಟ್ಟಿದ್ದಾರೆಂದು ವೈದ್ಯರು ಬಿಟ್ಟುಕೊಟ್ಟ ವ್ಯಕ್ತಿ ದಾರಿ ಮಧ್ಯದಲ್ಲಿ ಜೀವಂತವಾಗಿ ಉಸಿರಾಡಿದರು!

21/01/2022, 09:13

ಮಂಗಳೂರು(reporterkarnataka.com): ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ.

ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​ ಮಾಡಿ, ಅಂತ್ಯಸಂಸ್ಕಾರಕ್ಕೆ ತಯಾರಿ ಮಾಡುವಂತೆ ಸೂಚಿಸಿದ್ದು, ಅದರಂತೆಯೇ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸುತ್ತಿದ್ದರು.

ಮಂಗಳೂರು ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುತ್ತಿದ್ದ ವೇಳೆ ಉಪ್ಪಳ ತಲುಪುತ್ತಿದ್ದಂತೆಯೇ ಗುರುವ ಅವರ ದೇಹದಲ್ಲಿ ಚಲನೆ ಕಂಡುಬಂದಿದ್ದು, ಉಸಿರಾಡಲು ಆರಂಭಿಸಿದ್ದರು. ತಕ್ಷಣವೇ ರೋಗಿಯನ್ನು ಬದಿಯಡ್ಕದ ಕ್ಲಿನಿಕ್​ಗೆ ಕರೆದೊಯ್ದಿದ್ದು ಗುರುವ ಜೀವಂತವಾಗಿ ಇದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಬಳಿಕ ಅಲ್ಲಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು