1:35 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಳಿ ಜಿಂಕೆ ಶಿಕಾರಿ: ಬಾಡೂಟಕ್ಕೆ ಸಿದ್ಧತೆ ಮಾಡುತ್ತಿದ್ದ 6 ಮಂದಿ ಬಂಧನ

21/08/2023, 10:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡುತ್ತಿದ್ದ 6 ಮಂದಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದ ಆರೋಪದ ಮೇಲೆ‌ ಮೊಹಮ್ಮದ್ ಶಕೀಲ್ ಸೇರಿದಂತೆ 6 ಮಂದಿಯನ್ನು ದಸ್ತಗಿರಿ ಮಾಡಲಾಗಿದೆ.
ಮಲೆನಾಡಲ್ಲಿ ವನ್ಯಜೀವಿಗಳಿಗೆ ಆಪತ್ತು ಎದುರಾಗಿದೆ. ಬೃಹತ್ ಗಾತ್ರದ ಜಿಂಕೆ ಬೇಟೆ ಮಾಡಿ ಪಾರ್ಟಿ ಮಾಡುತ್ತಿದ್ದಾಗ ಅಧಿಕಾರಿಗಳ ದಾಳಿ ನಡೆಸಿ ದುಷ್ಕರ್ಮಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಳ್ಳ ಬೇಟೆ ಮಾಡಿ ಬಾಡೂಟಕ್ಕೆ ತಯಾರಿ ನಡೆಸುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೊಡಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಫಿ ತೋಟಕ್ಕೆ‌ ಹೊಂದಿಕೊಂಡಿರುವ ಪ್ರದೇಶದಲ್ಲಿ ಜಿಂಕೆ‌ ಶಿಕಾರಿ ಮಾಡಲಾಗಿದೆ. ಶಿಕಾರಿ ಮಾಡಿ ಅಲ್ಲೇ ಬಾಡೂಟಕ್ಕೆ ತಯಾರಿ ಮಾಡಿದ ಬಗ್ಗೆ ಸ್ಥಳೀಯರಿಂದ ಮಾಹಿತಿ‌ ಸಂಗ್ರಹಿಸಲಾಗಿದೆ. 8 ಕೆಜಿ ಜಿಂಕೆ ಮಾಂಸದ ಜೊತೆಗೆ ನಾಡ ಬಂದೂಕು ವಶ ಪಡಿಸಿಕೊಳ್ಳಲಾಗಿದೆ.
ಪಾರ್ಟಿ ಸ್ಥಳದಲ್ಲಿ ಎನ್.ಜಿ.ಓ ಸದಸ್ಯರಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು