12:50 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಭದ್ರಾ ರಿಸರ್ವ್ ಫಾರೆಸ್ಟ್ ನಲ್ಲಿ ಆನೆ ಹಂತಕರ ತಂಡ ಕಾರ್ಯಾಚರಣೆ?: ದಂತಕ್ಕಾಗಿ ಆನೆಗೆ ಗುಂಡಿಟ್ರಾ ಕಾಡುಗಳ್ಳರು?

26/09/2024, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಭದ್ರಾ ಮೀಸಲು ಅರಣ್ಯದ ಅಲ್ದಾರ ಬಳಿ ಆನೆ ಕಳೆಬರಹ ಪತ್ತೆಯಾಗಿದ್ದು,ಆನೆಯ ದಂತಕ್ಕಾಗಿ ಕಾಡುಗಳ್ಳರು ಆನೆಯನ್ನು ಗುಂಡಿಟ್ಟು ಕೊಂದಿರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆಯಾಗಿದೆ. ಆನೆ ತಿಂಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.


ಅಲ್ದಾರ ವಿಭಾಗದ ಭೈರಾಪುರ ವ್ಯಾಪ್ತಿಯಲ್ಲಿ ಯಥೇಚ್ಛವಾಗಿ ಕಾಡಾನೆಗಳು ಇವೆ. ಸ್ಥಳೀಯ ಮೀನುಗಾರರಿಂದ ಆನೆ ಕಳೆಬರಹದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಯಿತು. ಆನೆ ಸತ್ತ ಜಾಗದಲ್ಲಿ ಆನೆ ದಂತಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ದಂತಚೋರರು ದಂತಕ್ಕಾಗಿ ಆನೆಯನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಿಶೇಷವೆಂದರೆ,
ಆನೆ ಸತ್ತು ತಿಂಗಳಾದರೂ ವಿಷಯ ಅರಣ್ಯ ಇಲಾಖೆ ಗಮನಕ್ಕೆ ಬಂದಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡಲಾರಂಭಿಸಿದೆ.
ಆನೆ ಕಳೆಬರಹವನ್ನ ಅಧಿಕಾರಿಗಳು ಸರಿಯಾಗಿ ತಪಾಸಣೆ ಮಾಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.
ಪರಿಸರವಾದಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಅನುಮಾ‌ನ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು