8:44 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಭದ್ರಾ ರಿಸರ್ವ್ ಫಾರೆಸ್ಟ್ ನಲ್ಲಿ ಆನೆ ಹಂತಕರ ತಂಡ ಕಾರ್ಯಾಚರಣೆ?: ದಂತಕ್ಕಾಗಿ ಆನೆಗೆ ಗುಂಡಿಟ್ರಾ ಕಾಡುಗಳ್ಳರು?

26/09/2024, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಭದ್ರಾ ಮೀಸಲು ಅರಣ್ಯದ ಅಲ್ದಾರ ಬಳಿ ಆನೆ ಕಳೆಬರಹ ಪತ್ತೆಯಾಗಿದ್ದು,ಆನೆಯ ದಂತಕ್ಕಾಗಿ ಕಾಡುಗಳ್ಳರು ಆನೆಯನ್ನು ಗುಂಡಿಟ್ಟು ಕೊಂದಿರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆಯಾಗಿದೆ. ಆನೆ ತಿಂಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.


ಅಲ್ದಾರ ವಿಭಾಗದ ಭೈರಾಪುರ ವ್ಯಾಪ್ತಿಯಲ್ಲಿ ಯಥೇಚ್ಛವಾಗಿ ಕಾಡಾನೆಗಳು ಇವೆ. ಸ್ಥಳೀಯ ಮೀನುಗಾರರಿಂದ ಆನೆ ಕಳೆಬರಹದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಯಿತು. ಆನೆ ಸತ್ತ ಜಾಗದಲ್ಲಿ ಆನೆ ದಂತಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ದಂತಚೋರರು ದಂತಕ್ಕಾಗಿ ಆನೆಯನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಿಶೇಷವೆಂದರೆ,
ಆನೆ ಸತ್ತು ತಿಂಗಳಾದರೂ ವಿಷಯ ಅರಣ್ಯ ಇಲಾಖೆ ಗಮನಕ್ಕೆ ಬಂದಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡಲಾರಂಭಿಸಿದೆ.
ಆನೆ ಕಳೆಬರಹವನ್ನ ಅಧಿಕಾರಿಗಳು ಸರಿಯಾಗಿ ತಪಾಸಣೆ ಮಾಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.
ಪರಿಸರವಾದಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಅನುಮಾ‌ನ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು