11:54 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬದುಕಿನ ಯಾನ ಮುಗಿಸಿದ ಮಲಯಾಳಂ ನಟಿ ಶರಣ್ಯ: ಬ್ರೈನ್ ಟ್ಯೂಮರ್ ಗೆ 11 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕಲಾವಿದೆ !!

10/08/2021, 08:57

ತಿರುವನಂತಪುರ(reporterkarnataka.com)  ಮಲಯಾಳಂ ಕಿರುತೆರೆಯಲ್ಲಿ ಬಲು ದೊಡ್ಡ ಹೆಸರು ಮಾಡಿದ್ದ ಮಲಯಾಳಂ ನಟಿ ಶರಣ್ಯ ಶಶಿ ಅವರು ಕ್ಯಾನ್ಸರ್ ಎಂಬ ಮಹಾ ಮಾರಿಗೆ ಬಲಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ.

35  ವರ್ಷ ವಯಸ್ಸಿನ ಮುದ್ದು ಮುಖದ ನಟಿ ಕಳೆದ 10 ವರ್ಷದಿಂದ ಬ್ರೈನ್ ಟ್ಯೂಮರ್ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಅವರಿಗೆ ಒಟ್ಟು 11 ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಕೊರೋನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ನಂತರ ಇದ್ದಕ್ಕಿದ್ದ ಹಾಗೆ ಅವರ ದೇಹದಲ್ಲಿ ಸೋಡಿಯಂ ಲೆವಲ್ ಏರುಪೇರಾಯಿತು.

ಮತ್ತೆ ಅವರನ್ನು ತಿರುವನಂತಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಬದುಕಿನ ಯಾನವನ್ನು ಮುಗಿಸಿದ್ದಾರೆ.

2012ರಲ್ಲಿ ನಟಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೇ ಕಾರಣಕ್ಕೆ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು