4:09 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಬದುಕಿರುವಾಗಲೇ ಅಂಗದಾನ ಮಾಡಿ ಅಗಲಿದ ಉಪನ್ಯಾಸಕಿ ಅರ್ಚನಾ ಕಾಮತ್ ಗೆ ನುಡಿನಮನ: ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

28/09/2024, 23:37

ಮಂಗಳೂರು(reporterkarnataka.com):ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.


ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ‌ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಹನುಮಂತ್ ಕಾಮತ್, ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಆಡಳಿತ ಮಂಡಳಿಯ ಮಂಗಲ್ಪಾಡಿ ನರೇಶ್ ಶೆಣೈ, ಸಿಎ ಗೌತಮ್ ಪೈ, ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕೆನರಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ರಕ್ತದಾನ ಶಿಬಿರದಲ್ಲಿ 98 ಅಧಿಕ ನಾಗರಿಕರು ರಕ್ತದಾನ ಮಾಡಿದರು.
ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯದಿಂದ ಮಾದರಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು