9:04 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬದುಕಿರುವಾಗಲೇ ಅಂಗದಾನ ಮಾಡಿ ಅಗಲಿದ ಉಪನ್ಯಾಸಕಿ ಅರ್ಚನಾ ಕಾಮತ್ ಗೆ ನುಡಿನಮನ: ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

28/09/2024, 23:37

ಮಂಗಳೂರು(reporterkarnataka.com):ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.


ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ‌ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಹನುಮಂತ್ ಕಾಮತ್, ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಆಡಳಿತ ಮಂಡಳಿಯ ಮಂಗಲ್ಪಾಡಿ ನರೇಶ್ ಶೆಣೈ, ಸಿಎ ಗೌತಮ್ ಪೈ, ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕೆನರಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ರಕ್ತದಾನ ಶಿಬಿರದಲ್ಲಿ 98 ಅಧಿಕ ನಾಗರಿಕರು ರಕ್ತದಾನ ಮಾಡಿದರು.
ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯದಿಂದ ಮಾದರಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು