7:28 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ  ಮದುವೆ ಮನೆಯಲ್ಲಿ ನುಡಿ ನಮನ 

27/01/2022, 09:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ಮಂಗಳವಾರ ಮೆಹಂದಿ ಶಾಸ್ತ್ರ ನಡೆದಿದ್ದು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಿದ್ದಾರ್ಥ  ಅವರ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಹಾಗೂ ನುಡಿನಮನ ವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮದುಮಗ ಸಂತೋಷ್, ಬಡ ಕುಟುಂಬದಿಂದ ಬಂದ ನನಗೆ ಸಿದ್ದಾರ್ಥ ಹೆಗ್ಗಡೆ ಅವರು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕೊಟ್ಟ ಕಾರಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯವಾಯಿತು ಎಂದರು. 


ಬಿಜೆಪಿ ಮುಖಂಡರಾದ ಸಂಜಯ ಗೌಡ, ಪರೀಕ್ಷಿತ್ ಗೌಡ ಮುಂತಾದವರು ಆಗಮಿಸಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರಕ್ಕೆ ನುಡಿನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು