10:46 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ

30/05/2021, 09:49

ಭೀಮಣ್ಣ ಪೂಜಾರ್ ವಿಜಯಪುರ
info.reporterkarnataka@gmail.com

ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ಪ್ರಾಣಿಗಳು ಕಾಡು ಪ್ರಾಣಿಯ ದಾಳಿಗೆ ಸಾವನ್ನಪ್ಪುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರಿಗೆ ದೂರು ನೀಡಿದ್ದರು. ಶಾಸಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ದಾಳಿ ಮಾಡುತ್ತಿರುವುದು ಅದ್ಯಾವ ಪ್ರಾಣಿ ಎಂಬುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಇದರ ಪ್ರಕಾರ ದಾಳಿ ಮಾಡುವ ಕಾಡು ಪ್ರಾಣಿ ಚಿರತೆ ಎನ್ನುವುದು ಸ್ಪಷ್ಟವಾಗಿದೆ. ಮನೆಯೊಂದರ ಮುಂದೆ ಕಟ್ಟಿ ಹಾಕಿದ್ದ ಮೇಕೆಯೊಂದರ ಮೇಲೆ ಚಿರತೆ ದಾಳಿ ನಡೆಸಿ, ತಿಂದು ಹಾಕಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂಬಾರಹಳ್ಳ ಸುತ್ತಮುತ್ತಲಿನ ಕುಂಚನೂರು, ಜಕನೂರು, ಸನಾಳ ಹಾಗೂ ಆಲಗೂರಿನ ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು