4:27 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಬಗಂಬಿಲ: ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ18 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ

18/06/2024, 18:26

ಉಳ್ಳಾಲ(reporterkarnataka.com): ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ 18 ಲಕ್ಷ ಲೀಟರ್ ನೀರು ಶೇಖರಣ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣಕ್ಕೆ ಭಾನುವಾರ ಬಗಂಬಿಲ ಮೈದಾನದಲ್ಲಿ ಸ್ಥಳೀಯ ಶಾಸಕರೂ ಆದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖಾದರ್,
ಮುಂದಿನ ಐದು ವರ್ಷಗಳಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ನನ್ನ ಕ್ಷೇತ್ರಕ್ಕೆ ಕಾಲಿಡುವುದಿಲ್ಲ ಎಂದು ಕಳೆದ ಅವಧಿಯಲ್ಲಿ ಕೊಟ್ಟ ಭರವಸೆಯಂತೆ ದಿನದ 24ಗಂಟೆಯೂ ಕುಡಿಯುವ ನೀರು ಕೊಡುವಂತಹ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.
ಕ್ಷೇತ್ರದಲ್ಲಿ ನೀರಿನ ವ್ಯವಸ್ಥೆಗೆ 2ನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ 300 ಕೋಟಿ ರೂ. ಅನುದಾನ ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ್ದಾರೆ. 18 ಲಕ್ಷ ಲೀಟರ್ ನೀರಿನ ಟ್ಯಾಂಕ್ ಆಗಲಿದ್ದು, ನೀರು ತುಂಬೆಯಿಂದ ಕೊಣಾಜೆಗೆ ಸರಬರಾಜು ಮಾಡಿ ಅಲ್ಲಿಂದ ಶುದ್ಧಿಗೊಂಡು ಸೋಮೇಶ್ವರಕ್ಕೆ ಸರಬರಾಜು ಆಗಲಿದೆ. ಯೋಜನೆಗೆ ಶಿಲಾನ್ಯಾಸ ನಡೆದ ದಿನ ಇತಿಹಾಸದ ಪುಸ್ತಕದಲ್ಲಿ ಬರೆದಿಡುವಂತದ್ದು. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಯೋಜನೆಗೆ ಮುಖ್ಯಮಂತ್ರಿಯೇ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸೋಮೇಶ್ವರ ಪುರಸಭಾ ಸದಸ್ಯರಾದ ಮಾಲತಿ, ಜಯಣ್ಣ, ಮೋಹನ್ ಶೆಟ್ಟಿ, ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಆಲಿ, ಮುಖಂಡರಾದ ನವೀನ್ ಬಗಂಬಿಲ, ರಹ್ಮಾನ್ ಕೋಡಿಜಾಲ್, ಸಲಾಂ ಉಚ್ಚಿಲ್, ಪುರುಷೋತ್ತಮ ಶೆಟ್ಟಿ, ಮನ್ಸೂರ್ ಮಂಚಿಲ ಉಪಸ್ಥಿತರಿದ್ದರು.
ಜಿಲ್ಲಾ ಮುಖಂಡ ದಿನೇಶ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು