7:06 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಹರೈನ್ ನಲ್ಲಿ ಭೀಕರ ರಸ್ತೆ ಅಪಘಾತ: ಓಣಂ ಆಚರಿಸಿ ವಾಪಸ್ ಬರುತ್ತಿದ್ದ 5 ಮಂದಿ ಭಾರತೀಯರ ಸಾವು

03/09/2023, 22:27

ಮನಾಮಾ(reporterkarnataka.com): ಬಹರೈನ್’ನಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ 5 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ.
ಬಹರೈನ್ ರಾಜಧಾನಿ ಮನಾಮಾದ ಶೇಖ್ ಖಲೀಫಾ ಬಿನ್ ಸಲ್ಮಾನ್ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕೇರಳದ ನಿವಾಸಿಗಳು ಹಾಗೂ ತೆಲಂಗಾಣದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರನ್ನು ವಿ.ಪಿ.ಮಹೇಶ್ (33), ಮಲಪ್ಪುರಂನ ನಿವಾಸಿ ಜಗತ್ ವಾಸುದೇವನ್ (26), ತ್ರಿಶೂರ್ ನ ಚಾಲಕುಡಿಯ ಜಾರ್ಜ್ (28), ಕಣ್ಣೂರಿನ ಅಖಿಲ್ ರಘು (28), ತೆಲಂಗಾಣದ ಸುಮನ್ ರಾಜಣ್ಣ (27) ಮೃತರು ಎಂದು ಗುರುತಿಸಲಾಗಿದೆ.
ಸಲ್ಮಾಬಾದ್ ನ ಗಲ್ಫ್ ಏರ್ ಕ್ಲಬ್ ನಲ್ಲಿ ಮುಹರಕ್ ಅಲ್ ಹಿಲಾಲ್ ಆಸ್ಪತ್ರೆ ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಪಾಲ್ಗೊಂಡ ನಂತರ ಐವರು ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಐವರು ಆಸ್ಪತ್ರೆ ಯಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದು‌‌ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು