7:52 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಹಿಷ್ಕಾರ ಮನೆಯಲ್ಲಿ ಸಾವು: ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು; ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶ; ಕೊನೆಗೂ ಮೃತದೇಹಕ್ಕೆ ಮುಕ್ತಿ

21/04/2024, 10:53

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ರಾಜ್ಯದ ಮುಖ್ಯಮಂತ್ರಿಯ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲೂಕು ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಯುವಕನ ಅಂತ್ಯಸಂಸ್ಕಾರಕ್ಕೆ ಗ್ರಾಮದಲ್ಲಿ ಅವಕಾಶ ನೀಡದ ಹಿನ್ನಲೆ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಮೃತದೇಹಕ್ಕೆ ಮುಕ್ತಿ ದೊರಕಿಸಿದ್ದಾರೆ.


ಜಿಲ್ಲಾಧಿಕಾರಿಗಳ ಮೌಖಿಕ ಆದೇಶಕ್ಕೆ ತಹಸೀಲ್ದಾರ್ ಶಿವಕುಮಾರ್ ಕಾಸ್ನೋರು ಹಾಗೂ ರೆವೆನ್ಯೂ ಪ್ರಕಾಶ್ ಗ್ರಾಮಕ್ಕೆ ಭೇಟಿ ನೀಡಿ ಮುಖಂಡರ ಮನ ಒಲಿಸಿ ನಂತರ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಹುಲಹಳ್ಳಿ ಸಮೀಪ ಇರುವ ತರಗನಹಳ್ಳಿಯ ನಿವಾಸಿ ಕುಳ್ಳನಾಯಕನ ಕುಟುಂಬದ ಮೇಲೆ ನಾಲ್ಕು ವರ್ಷಗಳ ಹಿಂದೆ ಮುಖಂಡರು ಬಹಿಷ್ಕಾರ ಹೇರಿದ್ದರು. ಬಹಿಷ್ಕಾರವನ್ನ ತೆರುವುಗೊಳಿಸಲು ಕುಳ್ಳನಾಯಕ ಹುಲ್ಲಹಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸರ್ಕಾರಿ ಕಚೇರಿಗೆ ಸಾಕಷ್ಟು ಅಲೆದಾಡಿದ್ದ. ತಾಲೂಕು ಆಡಳಿತ ಸೂಕ್ತವಾಗಿ ಸ್ಪಂದಿಸಿರಲಿಲ್ಲ. ನಿನ್ನೆ ಕುಳ್ಳನಾಯಕನ ಮಗ 15 ವರ್ಷದ ಮಾದೇಶ ಮೃತಪಟ್ಟಿದ್ದಾನೆ. ಅಂತ್ಯಸಂಸ್ಕಾರ ಮಾಡಲು ಗ್ರಾಮದಲ್ಲಿ ಅವಕಾಶ ನೀಡಿಲ್ಲ ಹಾಗೂ ಯಾರೂ ಸಹ ಮುಂದೆ ಬಂದಿಲ್ಲ. ಇದರಿಂದ ನೊಂದ ಕುಳ್ಳನಾಯಕ ಮಗನ ಮೃತದೇಹವನ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಕೊಂಡೊಯ್ಯಲು ಮುಂದಾಗಿದ್ದಾನೆ. ಈ ಮಾಹಿತಿ ಅರಿತ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕುಳ್ಳನಾಯಕನ ಪರಿಸ್ಥಿತಿ ಅರಿತು ಕೂಡಲೇ ತಹಸೀಲ್ದಾರ್ ಗೆ ಸೂಚನೆ ನೀಡಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ. ಎಚ್ಚೆತ್ತ ತಹಸೀಲ್ದಾರ್ ಶಿವಕುಮಾರ್ ಕಾಸ್ಮೂರು ಮತ್ತು ಪ್ರಕಾಶ್ ರವರು ಗ್ರಾಮದ ಮುಖಂಡರ ಮನ ಒಲಿಸಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿದ್ದಾರೆ. 21ನೇ ಶತಮಾನಕ್ಕೆ ಕಾಲಿಟ್ಟರೂ ಬಹಿಷ್ಕಾರದ ಪಿಡುಗಿನಿಂದ ಹೊರಬರಲು ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶದಿಂದ ಸಧ್ಯ ಅಂತ್ಯಕ್ರಿಯೆ ನಡೆಸಲಾಗಿದ್ದು ಮೃತದೇಹಕ್ಕೆ ಮುಕ್ತಿ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು