5:39 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ

14/11/2024, 20:59

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ಹರೀಶ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ.5 ಮಂದಿಗೆ ಸಮಾಧಾನಕರ ಬಹುಮಾನವನ್ನು ಘೋಷಿಸಲಾಗಿದೆ.
ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ, ವೇಣೂರು ಸರಕಾರಿ ಪ್ರೌಢ ಶಾಲೆಯ ಶರತ್ , ವೇಣೂರು ಸರಕಾರಿ ಪ್ರೌಢ ಶಾಲೆಯ ಸಾತ್ವಿಕ್ ಗಣೇಶ್ , ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯ ಸೋನಾಲಿ ಕೆ.ಎಸ್. , ದೇರಳಕಟ್ಟೆ ವಿದ್ಯಾರತ್ನ ಶಾಲೆಯ ಮೆಹೆಕ್ ಫಾತಿಮಾ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಹಿರಿಯ ಕಲಾವಿದ ಹಾಗೂ ನಿವೃತ್ತ ಚಿತ್ರಕಲಾ ಶಿಕ್ಷಕ ಗಣೇಶ್ ಸೋಮಾಯಾಜಿ, ಮಹಾಲಸಾ ಚಿತ್ರಕಲಾ ಶಾಲೆಯ ಶಿಕ್ಷಕ ಎನ್.ಎಸ್.ಪತ್ತಾರ್, ಯುವ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು