3:30 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ

14/11/2024, 20:59

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ಹರೀಶ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ.5 ಮಂದಿಗೆ ಸಮಾಧಾನಕರ ಬಹುಮಾನವನ್ನು ಘೋಷಿಸಲಾಗಿದೆ.
ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ, ವೇಣೂರು ಸರಕಾರಿ ಪ್ರೌಢ ಶಾಲೆಯ ಶರತ್ , ವೇಣೂರು ಸರಕಾರಿ ಪ್ರೌಢ ಶಾಲೆಯ ಸಾತ್ವಿಕ್ ಗಣೇಶ್ , ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯ ಸೋನಾಲಿ ಕೆ.ಎಸ್. , ದೇರಳಕಟ್ಟೆ ವಿದ್ಯಾರತ್ನ ಶಾಲೆಯ ಮೆಹೆಕ್ ಫಾತಿಮಾ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಹಿರಿಯ ಕಲಾವಿದ ಹಾಗೂ ನಿವೃತ್ತ ಚಿತ್ರಕಲಾ ಶಿಕ್ಷಕ ಗಣೇಶ್ ಸೋಮಾಯಾಜಿ, ಮಹಾಲಸಾ ಚಿತ್ರಕಲಾ ಶಾಲೆಯ ಶಿಕ್ಷಕ ಎನ್.ಎಸ್.ಪತ್ತಾರ್, ಯುವ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು