6:16 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ

14/11/2024, 20:59

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ಹರೀಶ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ.5 ಮಂದಿಗೆ ಸಮಾಧಾನಕರ ಬಹುಮಾನವನ್ನು ಘೋಷಿಸಲಾಗಿದೆ.
ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ, ವೇಣೂರು ಸರಕಾರಿ ಪ್ರೌಢ ಶಾಲೆಯ ಶರತ್ , ವೇಣೂರು ಸರಕಾರಿ ಪ್ರೌಢ ಶಾಲೆಯ ಸಾತ್ವಿಕ್ ಗಣೇಶ್ , ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯ ಸೋನಾಲಿ ಕೆ.ಎಸ್. , ದೇರಳಕಟ್ಟೆ ವಿದ್ಯಾರತ್ನ ಶಾಲೆಯ ಮೆಹೆಕ್ ಫಾತಿಮಾ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಹಿರಿಯ ಕಲಾವಿದ ಹಾಗೂ ನಿವೃತ್ತ ಚಿತ್ರಕಲಾ ಶಿಕ್ಷಕ ಗಣೇಶ್ ಸೋಮಾಯಾಜಿ, ಮಹಾಲಸಾ ಚಿತ್ರಕಲಾ ಶಾಲೆಯ ಶಿಕ್ಷಕ ಎನ್.ಎಸ್.ಪತ್ತಾರ್, ಯುವ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು