10:41 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ

14/11/2024, 20:59

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ಹರೀಶ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ.5 ಮಂದಿಗೆ ಸಮಾಧಾನಕರ ಬಹುಮಾನವನ್ನು ಘೋಷಿಸಲಾಗಿದೆ.
ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ, ವೇಣೂರು ಸರಕಾರಿ ಪ್ರೌಢ ಶಾಲೆಯ ಶರತ್ , ವೇಣೂರು ಸರಕಾರಿ ಪ್ರೌಢ ಶಾಲೆಯ ಸಾತ್ವಿಕ್ ಗಣೇಶ್ , ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯ ಸೋನಾಲಿ ಕೆ.ಎಸ್. , ದೇರಳಕಟ್ಟೆ ವಿದ್ಯಾರತ್ನ ಶಾಲೆಯ ಮೆಹೆಕ್ ಫಾತಿಮಾ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಹಿರಿಯ ಕಲಾವಿದ ಹಾಗೂ ನಿವೃತ್ತ ಚಿತ್ರಕಲಾ ಶಿಕ್ಷಕ ಗಣೇಶ್ ಸೋಮಾಯಾಜಿ, ಮಹಾಲಸಾ ಚಿತ್ರಕಲಾ ಶಾಲೆಯ ಶಿಕ್ಷಕ ಎನ್.ಎಸ್.ಪತ್ತಾರ್, ಯುವ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು