9:38 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಬಹುಭಾಷಾ ಸಂಸ್ಕೃತಿಯಲ್ಲಿ‌ ಏಕತಾ ಭಾವ: ಮಂಚಿಯಲ್ಲಿ ಉಪನ್ಯಾಸಕ ಜಯಾನಂದ ಪೆರಾಜೆ

24/12/2024, 18:38

ಬಂಟ್ವಾಳ(reporterkarnataka com): ಭಾರತೀಯ ಸಂಸ್ಕೃತಿಯು ಕೃಷಿ ಸಂಸ್ಕೃತಿಯ ಮೂಲದಿಂದ ಬೆಳೆದು ಬಂದಿದೆ. ಬಹುಭಾಷಾ ಸಂಸ್ಕೃತಿ ಇದ್ದರೂ ಏಕಭಾವವನ್ನು ಹೊಂದಿದೆ. ವಿವಿಧ ಹಬ್ಬಗಳ ಆಚರಣೆ ಹಾಗೂ ಜಾನಪದ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಹಿರಿಯ ಪತ್ರಕರ್ತ, ಉಪನ್ಯಾಸಕ ಜಯಾನಂದೆ ಪೆರಾಜೆ ಹೇಳಿದರು.
ಅವರು ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಕುಕ್ಕಾಜೆಯ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಏರ್ಪಡಿಸಲಾದ 3 ದಿನಗಳ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಂಚಿ ಹಿ.ಪ್ರಾ. ಶಾಲಾ ಸಂಚಾಲಕ ನೂಜಿಬೈಲು ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿ ಮಾತನಾಡಿದರು. ನಾಟಕ , ಸಾಹಿತ್ಯ , ಸಂಗೀತ , ಚಿತ್ರಕಲೆಗಳೆಲ್ಲ ಸಂಸ್ಕೃತಿಯ ವಿವಿಧ ರೂಪಗಳಾಗಿವೆ. ಜೀವನವು ಕಲಾವಂತಿಕೆಯಿಂದ ಕೂಡಿರಬೇಕು. ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಸಂಸ್ಕೃತಿಯ ಮಹತ್ವವನ್ನು ತಿಳಿಸಿದರು. ಹಿರಿಯ ನ್ಯಾಯವಾದಿ ಚಂದ್ರಶೇಖರ ಕೆ.ವಿ. ಸಭಾಧ್ಯಕ್ಷತೆ ವಹಿಸಿದ್ದರು.
*ಸಾಧಕರಿಗೆ ಸನ್ಮಾನ:*
ಆಕಾಶವಾಣಿ ಕಲಾವಿದೆ ಗಮಕಿ ಮಂಜುಳಾ ಸುಬ್ರಮಣ್ಯ ಭಟ್ , ಕವಯಿತ್ರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಿಜಯಾ ಶೆಟ್ಟಿ ಸಾಲೆತ್ತೂರು, ಲೇಖಕಿ ಅನಿತಾ ನರೇಶ್ ಮಂಚಿ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಭಜನಾ ಮಂಡಳಿ ಅಧ್ಯಕ್ಷ ಗಣೇಶ ಐತಾಳ್ ಸ್ವಾಗತಿಸಿದರು. ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಪ್ರಸ್ತಾವನೆ ಗೈದು‌ಸಾರ್ವಜನಿಕರ ಸಹಕಾರವನ್ನು ಸ್ಮರಿಸಿದರು. ಶೈಲಜಾ ಮತ್ತು ಶಿಕ್ಷಕ ಉಮಾನಾಥ ರೈ ಸನ್ಮಾನಪತ್ರ ವಾಚಿಸಿದರು. ಬಾಲಕೃಷ್ಣ ಶೆಟ್ಟಿ ನಿರೂಪಿಸಿದರು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಮಕ ವಿದ್ಯಾರ್ಥಿಗಳಿಂದ ಸಮೂಹ ಗಾಯನ ಮತ್ತು ಕುಮಾರ ವ್ಯಾಸ ಭಾರತದಿಂದ ಆಯ್ದ ಸೌಗಂಧಿಕಾ ಸಂಧಿ ಗಮಕ ವಾಚನ, ವ್ಯಾಖ್ಯಾನ ನಡೆಯಿತು. ಮಂಜುಳಾ ಸುಬ್ರಮಣ್ಯ ವಾಚನ ಮಾಡಿ ಸರ್ಪಂಗಳ ಈಶ್ವರ ಭಟ್ ವ್ಯಾಖ್ಯಾನಿಸಿದರು. ಸಮಾರೋಪ ಸಮಾರಂಭವು ಮಂಚಿ ಗ್ರಾ.ಪಂ ಅಧ್ಯಕ್ಷ ಜಿ.ಎಂ. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ರಮೇಶರಾವ್ ಪತ್ತುಮುಡಿ , ನಿಶ್ಚಲ್ ಜಿ.ಶೆಟ್ಟಿ ಕಲ್ಲಾಡಿ ಅತಿಥಿಗಳಾಗಿದ್ದರು.
ಆಕಾಶವಾಣಿ ಕಲಾವಿದೆ ಮಂಜುಳಾ ಗುರುರಾಜ್ ರಾವ್ ಇರಾ ಇವರಿಂದ ಪಾದುಕಾ ಪಟ್ಟಾಭಿಷೇಕ ಹರಿಕಥೆ, ಶಿವರಂಜಿನಿ ಕಲಾಕೇಂದ್ರ ಪೊಳಲಿ ಇವರಿಂದ ಸಾಂಸ್ಕೃತಿಕ ವೈವಿಧ್ಯ, ಶಾರದಾ ಎಸ್ ರಾವ್ ಬಳಗದವರಿಂದ ಸ್ಯಾಕ್ಸೋ ಫೋನ್ ವಾದನ ಜನಮೆಚ್ಚುಗೆ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು