8:24 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ 

07/07/2021, 15:29

ನವದೆಹಲಿ(reporterkarnataka news):

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂದಿಯನ್ನುbಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದ್ದು, ಅವರೂ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ಅವರು

ನಡೆಯುತ್ತಿರುವ ಮೊದಲ ಸಂಪುಟ ಪುನರ್ರಚನೆ ಇದಾಗಿದೆ. ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸಂಸದ ಭೂಪೇಂದ್ರ ಯಾದವ್, ಮತ್ತು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಬಿ ಎಲ್ ವರ್ಮಾ ಅವರಿಗೆ ಸಂಪುಟದಲ್ಲಿ ಸ್ಥಾನ ಖಚಿತಪಡಿಸಿ ಕರೆಗಳು ಬಂದಿವೆ ಎನ್ನಲಾಗುತ್ತಿದೆ.

ಕರ್ನಾಟಕದ ಸಂಸದೆ ಶೋಭಾ ಕರಂದ್ಲಾಜೆ, ಸಿರ್ಸಾ ಸಂಸದೆ ಸುನೀತಾ ದುಗ್ಗರ್, ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಮತ್ತು ಮಹಾರಾಷ್ಟ್ರ ಸಂಸದೆಯರಾದ ಹಿನಾ ಗವಿತ್ ಮತ್ತು ಪ್ರೀತಂ ಮುಂಡೆ ಸೇರಿದಂತೆ ಮಹಿಳೆರಿಗೆ ಸಂಪುಟ ವಿಸ್ತರಣೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು