4:45 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ 

07/07/2021, 15:29

ನವದೆಹಲಿ(reporterkarnataka news):

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂದಿಯನ್ನುbಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದ್ದು, ಅವರೂ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ಅವರು

ನಡೆಯುತ್ತಿರುವ ಮೊದಲ ಸಂಪುಟ ಪುನರ್ರಚನೆ ಇದಾಗಿದೆ. ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸಂಸದ ಭೂಪೇಂದ್ರ ಯಾದವ್, ಮತ್ತು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಬಿ ಎಲ್ ವರ್ಮಾ ಅವರಿಗೆ ಸಂಪುಟದಲ್ಲಿ ಸ್ಥಾನ ಖಚಿತಪಡಿಸಿ ಕರೆಗಳು ಬಂದಿವೆ ಎನ್ನಲಾಗುತ್ತಿದೆ.

ಕರ್ನಾಟಕದ ಸಂಸದೆ ಶೋಭಾ ಕರಂದ್ಲಾಜೆ, ಸಿರ್ಸಾ ಸಂಸದೆ ಸುನೀತಾ ದುಗ್ಗರ್, ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಮತ್ತು ಮಹಾರಾಷ್ಟ್ರ ಸಂಸದೆಯರಾದ ಹಿನಾ ಗವಿತ್ ಮತ್ತು ಪ್ರೀತಂ ಮುಂಡೆ ಸೇರಿದಂತೆ ಮಹಿಳೆರಿಗೆ ಸಂಪುಟ ವಿಸ್ತರಣೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು