5:59 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಬಾಹ್ಯಾಕಾಶಕ್ಕೆ ಜಿಗಿಯಲಿದೆ ವಿದ್ಯಾರ್ಥಿನಿಯರು ತಯಾರಿಸಿದ ಪುಟ್ಟ ಸ್ಯಾಟಲೈಟ್..!: ಇದರ ತೂಕ ಎಷ್ಟು ಗೊತ್ತೇ?

31/07/2022, 18:39

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪ್ರಪ್ರಥಮ ಬಾರಿಗೆ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಸೇರಿಕೊಂಡು ತಯಾರಿಸಿದ ಪುಟ್ಟ ಉಪಗ್ರಹವೊಂದು ಬಾಹ್ಯಾಕಾಶಕ್ಕೆ ಜಿಗಿಯಲು ಸಿದ್ಧತೆ ನಡೆಸಿದೆ. ದೇಶದ 75 ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ ಪುಟಾಣಿ ಉಪಗ್ರಹ ಇದಾಗಿದೆ.

ಈ ಉಪಗ್ರಹವು ಕೇವಲ 8 ಕೆ.ಜಿ ತೂಕ ಹೊಂದಿದ್ದು, ತನ್ನದೇ ಸೌರ ಫಲಕ, ದೀರ್ಘ ವ್ಯಾಪ್ತಿಯ ಸಂವಹನ ಸಲಕರೆಣೆ, ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೀವಿತಾವಧಿ ಮಾತ್ರ 6 ತಿಂಗಳುಗಳಾಗಿವೆ.

ವಿಶ್ವಸಂಸ್ಥೆಯ ’ಬಾಹ್ಯಾಕಾಶದಲ್ಲಿ ಮಹಿಳೆಯರು’ ಎಂಬ ವಿಷಯದ ಆಧಾರದಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಉಪಗ್ರಹ ನಿರ್ಮಾಣವಾಗಿದೆ ಎಂದು ಮುಖ್ಯ ತಂತ್ರಜ್ಞಾನ ಅಧಿಕಾರಿ ರಿಫಾತ್ ಶಾರೂಕ್ ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ಈ ಉಪಗ್ರಹವು ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋನ ಸಣ್ಣ ಉಪಗ್ರಹ ಉಡಾವಣೆ ನೌಕೆ ಎಸ್‌ಎಸ್‌ಎಲ್‌ವಿ ಮೂಲಕ ಉಡಾವಣೆಯಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು