2:21 AM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು