11:33 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು