5:34 PM Thursday3 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು