10:07 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು