2:02 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು