1:09 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು