7:09 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು