4:49 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ

09/08/2024, 11:54

ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಸದ್ಗುರು ಮಧುಸೂಧನ ಸಾಯಿ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ತಮ ಶಾಲಾ ನೈರ್ಮಲ್ಯ, ಶಾಲಾ ಕೈತೋಟ, ಹಸಿರುವನ, ಪ್ರಯೋಗಾಲಯ,ವೈವಿಧ್ಯಮಯ ಪಠ್ಯಪೂರಕ ಚಟುವಟಿಕೆಗಳ ಆಧಾರದ ಮೇಲೆ ಟ್ರಸ್ಟ್ ಪ್ರತ್ಯಕ್ಷ ಪರಿಶೀಲನೆ ಹಾಗೂ ಮೌಲ್ಯಮಾಪನ ನಡೆಸಿ ಶಾಲೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ರೂ.10000 ನಗದು ಬಹುಮಾನ,ಪ್ರಶಸ್ತಿ ಫಲಕ, ಶಿಕ್ಷಕರ ಡೈರಿ ಹಾಗೂ ಶಾಲಾ ವಿದ್ಯಾರ್ಥಿಗಳ ಮೌಲ್ಯಾಧಾರಿತ ಗ್ರಂಥಾಲಯ ಪುಸ್ತಕಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು