1:57 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್

26/03/2022, 10:09

ಬೈಲಹೊಂಗಲ(reporterkarnataka.com):

ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯ ಅಧೀಕ್ಷಕ ಬಸವರಾಜು ಮೂಡಸಿ ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಹೋಬಳಿ ವ್ಯಾಪ್ತಿಗೆ ಬರುವ ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಹನುಮಂತ ಬಸವಣೆಪ್ಪ ಆಲಿಯಾಸ್ ಲಕ್ಕಣ್ಣನವರ್ ಎಂಬಾತನ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ, ದಾಳಿ ಸಮಯದಲ್ಲಿ 2 ಲೀಟರ್  24  ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕಳ್ಳ ಭಟ್ಟಿ ಸಾರಾಯಿ ಸಿಕ್ಕಿದ್ದು, ಒಟ್ಟು 24 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. 

ಬೈಲಹೊಂಗಲ ಅಧೀಕ್ಷಕ  ಬಸವರಾಜು ಮೂಡಸಿ ನೇತೃತ್ವದಲ್ಲಿ ನಡೆದ ಈ  ದಾಳಿಯಲ್ಲಿ ಉಪ ನಿರೀಕ್ಷಕ ಡಿ.ಎಸ್. ತಲ್ಲೂರ, ವೀರೇಶ್ ಯರಗೋಪ್ಪ, ಸಿಬ್ಬಂದಿಗಳಾದ ವಿ.ಎಂ. ಕೇರಾಳಿ, ಎನ್.ವೈ. ತಗರಿ

ಭಾಗವಹಿಸಿದ್ದರು. ಒಟ್ಟಾರೆ  ಅಕ್ರಮ ಕಳ್ಳಭಟ್ಟಿ ಮಾರಾಟಕ್ಕೆ ಕಡಿವಾಣಕ್ಕೆ ಬ್ರೇಕ್ ಹಾಕಲು ಮುಂದಾಗಿ ದಿನ ನಿತ್ಯ ಕಾರ್ಯಾಚರಣೆ ಮಾಡುತ್ತಿರುವ ಬೈಲಹೊಂಗಲ ಅಧೀಕ್ಷಕ ಬಸವರಾಜು ಮೂಡಸಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಅಬಕಾರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು