2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್

26/03/2022, 10:09

ಬೈಲಹೊಂಗಲ(reporterkarnataka.com):

ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯ ಅಧೀಕ್ಷಕ ಬಸವರಾಜು ಮೂಡಸಿ ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಹೋಬಳಿ ವ್ಯಾಪ್ತಿಗೆ ಬರುವ ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಹನುಮಂತ ಬಸವಣೆಪ್ಪ ಆಲಿಯಾಸ್ ಲಕ್ಕಣ್ಣನವರ್ ಎಂಬಾತನ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ, ದಾಳಿ ಸಮಯದಲ್ಲಿ 2 ಲೀಟರ್  24  ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕಳ್ಳ ಭಟ್ಟಿ ಸಾರಾಯಿ ಸಿಕ್ಕಿದ್ದು, ಒಟ್ಟು 24 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. 

ಬೈಲಹೊಂಗಲ ಅಧೀಕ್ಷಕ  ಬಸವರಾಜು ಮೂಡಸಿ ನೇತೃತ್ವದಲ್ಲಿ ನಡೆದ ಈ  ದಾಳಿಯಲ್ಲಿ ಉಪ ನಿರೀಕ್ಷಕ ಡಿ.ಎಸ್. ತಲ್ಲೂರ, ವೀರೇಶ್ ಯರಗೋಪ್ಪ, ಸಿಬ್ಬಂದಿಗಳಾದ ವಿ.ಎಂ. ಕೇರಾಳಿ, ಎನ್.ವೈ. ತಗರಿ

ಭಾಗವಹಿಸಿದ್ದರು. ಒಟ್ಟಾರೆ  ಅಕ್ರಮ ಕಳ್ಳಭಟ್ಟಿ ಮಾರಾಟಕ್ಕೆ ಕಡಿವಾಣಕ್ಕೆ ಬ್ರೇಕ್ ಹಾಕಲು ಮುಂದಾಗಿ ದಿನ ನಿತ್ಯ ಕಾರ್ಯಾಚರಣೆ ಮಾಡುತ್ತಿರುವ ಬೈಲಹೊಂಗಲ ಅಧೀಕ್ಷಕ ಬಸವರಾಜು ಮೂಡಸಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಅಬಕಾರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು