1:38 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್

26/03/2022, 10:09

ಬೈಲಹೊಂಗಲ(reporterkarnataka.com):

ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯ ಅಧೀಕ್ಷಕ ಬಸವರಾಜು ಮೂಡಸಿ ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಹೋಬಳಿ ವ್ಯಾಪ್ತಿಗೆ ಬರುವ ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಹನುಮಂತ ಬಸವಣೆಪ್ಪ ಆಲಿಯಾಸ್ ಲಕ್ಕಣ್ಣನವರ್ ಎಂಬಾತನ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ, ದಾಳಿ ಸಮಯದಲ್ಲಿ 2 ಲೀಟರ್  24  ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕಳ್ಳ ಭಟ್ಟಿ ಸಾರಾಯಿ ಸಿಕ್ಕಿದ್ದು, ಒಟ್ಟು 24 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. 

ಬೈಲಹೊಂಗಲ ಅಧೀಕ್ಷಕ  ಬಸವರಾಜು ಮೂಡಸಿ ನೇತೃತ್ವದಲ್ಲಿ ನಡೆದ ಈ  ದಾಳಿಯಲ್ಲಿ ಉಪ ನಿರೀಕ್ಷಕ ಡಿ.ಎಸ್. ತಲ್ಲೂರ, ವೀರೇಶ್ ಯರಗೋಪ್ಪ, ಸಿಬ್ಬಂದಿಗಳಾದ ವಿ.ಎಂ. ಕೇರಾಳಿ, ಎನ್.ವೈ. ತಗರಿ

ಭಾಗವಹಿಸಿದ್ದರು. ಒಟ್ಟಾರೆ  ಅಕ್ರಮ ಕಳ್ಳಭಟ್ಟಿ ಮಾರಾಟಕ್ಕೆ ಕಡಿವಾಣಕ್ಕೆ ಬ್ರೇಕ್ ಹಾಕಲು ಮುಂದಾಗಿ ದಿನ ನಿತ್ಯ ಕಾರ್ಯಾಚರಣೆ ಮಾಡುತ್ತಿರುವ ಬೈಲಹೊಂಗಲ ಅಧೀಕ್ಷಕ ಬಸವರಾಜು ಮೂಡಸಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಅಬಕಾರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು