5:53 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬಜಾಲ್ ಅಂಡರ್ ಪಾಸ್ ಮತ್ತೆ ಭರ್ತಿ: ಮಳೆ ನೀರಿನಿಂದ ಸಂಚಾರ ಸ್ಥಗಿತ; 10-15 ವರ್ಷಗಳಿಂದ ಸಮಸ್ಯೆ ಜೀವಂತ; ಅಧಿಕಾರಸ್ಥರು ಮೌನ!

26/06/2024, 15:44

ಮಂಗಳೂರು(reporterkarnataka.com): ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಕಳೆದ 10-15 ವರ್ಷಗಳಿಂದ ಈ ಸಮಸ್ಯೆ ಜೀವಂತವಾಗಿದೆ.


ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ, ಎಕ್ಕೂರು ಹೈವೇ,ಜಪ್ಪಿನ ಮೊಗರು ಕಡೆಗೆ ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ. ಸ್ಥಳೀಯ ಕಾರ್ಪೋರೇಟರ್ ಮಾತನಾಡುತ್ತಿಲ್ಲ. ಪಾಲಿಕೆ, ಜಿಲ್ಲಾಡಳಿತ ಮೌನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು