8:29 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಬಜೆ ಡ್ಯಾಮ್ ಗೆ ಭಾರೀ ಪ್ರಮಾಣದಲ್ಲಿ ಮಳೆ ನೀರು: ಕುದಿಸಿ ಕುಡಿಯಲು ನಾಗರಿಕರಿಗೆ ಸೂಚನೆ

26/06/2023, 23:20

ಉಡುಪಿ (reporterkarnataka.com): ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ , ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು ಶುದ್ಧೀಕರಣ ಮಾಡಿ, ಸಾರ್ವಜನಿಕರಿಗೆ ಸರಬರಾಜು ಮಾಡಲಾಗಿರುತ್ತದೆ. ಆದ್ದರಿಂದ ನೀರನ್ನು ಕುದಿಸಿ ಕುಡಿಯಲು ಸೂಚಿಸಲಾಗಿದೆ.
ಇದು ಪ್ರಥಮ ಮಳೆಯಾಗಿರುವುದರಿಂದ ಆಲಂ ಪ್ರಮಾಣ ಈ ಹಿಂದೆ ನಿಗಧಿಪಡಿಸಿದಂತೆ ಇರುವುದರಿಂದ ಸಾರ್ವಜನಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ಕೆಂಪು ನೀರು ಸರಬರಾಜು ಆಗಿರುತ್ತದೆ.
ಈಗಾಗಲೇ ಆಲಂ ಪ್ರಮಾಣವನ್ನು ಸರಿಪಡಿಸಲಾಗಿದ್ದು, ನಗರಸಭೆ ನೀರು, ಸರಬರಾಜು ಮಾಡುತ್ತಿರುವ ನೀರಿನಲ್ಲಿ ಕಸ-ಕಡ್ಡಿಗಳು ಬಂದಿರುವುದಿಲ್ಲ. ನೀರಿನ ಬಣ್ಣ ಮಾತ್ರ ಬದಲಾವಣೆ ಆಗಿರುತ್ತದೆ. ಇದು ಹೆಚ್ಚು ಮಳೆ ಬಿದ್ದಾಗ ಸ್ವಾಭಾವಿಕವಾಗಿ ಸಂಪೂರ್ಣ ಬಣ್ಣ ತೆಗೆಯಲು ಸಾಧ್ಯವಾಗಿರುವುದಿಲ್ಲ. ಆದಾಗ್ಯೂ ನಗರಸಭೆ ಸಾರ್ವಜನಿಕರ ಸುರಕ್ಷತೆಗೋಸ್ಕರ ಸಂಪೂರ್ಣ ಶುದ್ದೀಕರಣ ಮಾಡಿ ನೀರು ವಿತರಿಸಲು ಕ್ರಮ ಕೈಗೊಳ್ಳಲಿದ್ದು , ಮಳೆಗಾಲ ಆಗಿರುವ ಕಾರಣ ನೀರನ್ನು ಕಾಯಿಸಿ ಕುಡಿಯುವಂತೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು