2:27 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಕ್ರೀದ್ ಹಬ್ಬವನ್ನು ಸರಕಾರದ ನಿಯಮಾನುಸಾರ ಆಚರಿಸಿ: ಪೊಲೀಸ್ ಕಮೀಷನರ್ ಶಶಿಕುಮಾರ್

17/07/2021, 20:22

ಸುರತ್ಕಲ್(reporterkarnataka news): ಕೋವಿಡ್ ನ ಮಹಾಮಾರಿಯಿಂದಾಗಿ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು‌. ಆದರೆ ಲಾಕ್ ಡೌನ್ ಸಡಿಲವಾದ ಬಳಿಕ ಎಲ್ಲಕ್ಕೂ ವಿನಾಯಿತಿ ನೀಡಲಾಗಿದೆ. ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸರಕಾರದ ನಿಯಾನುಸಾರ ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಮಸೀದಿಗಳಿಗೂ ಭೇಟಿ ನೀಡಿ ಹೆಚ್ಚು ಜನ ಸೇರದೆ, ಅಗತ್ಯ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸಲು ಮಸೀದಿಯ ಆಡಳಿತ ಮಂಡಳಿಯವರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಮಂಗಳೂರು ಪೊಲೀಸ್  ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. 

ಅವರು ಕೃಷ್ಣಾಪುರ 7ನೇ ವಿಭಾಗದ ಬದ್ರಿಯಾ ಜುಮ್ಮಾ ಮಸೀದಿ, ಕೇಂದ್ರ ಜಮಾತ್ ನಲ್ಲಿ ಆಡಳಿತ ಮಂಡಳಿಯವರಿಗೆ ಸರಕಾರದ ನಿಯಮದ ಕುರಿತು ಮಾಹಿತಿ ನೀಡುತ್ತಾ ಹಬ್ಬದ ಸಂದರ್ಭದಲ್ಲಿ 5೦ ಜನರಿಗಿಂತ ಅಧಿಕ ಜನರು ಸೇರದೇ, ಸಾಮಾಜಿಕ ಅಂತರವನ್ನು ಕಾಪಾಡಬೇಕು.

ಸರಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸತಕ್ಕದ್ದು. ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರದೇ ಎಲ್ಲರೂ ಪಾಲಿಸಬೇಕು.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶಾಂತಿ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸದಾ ಸಿದ್ಧವಾಗಿದೆ‌‌ ಎಂದರು‌. 

ಡಿಸಿಪಿ ಬಿ.ಪಿ ದಿನೇಶ್ ಕುಮಾರ್, ಪಣಂಬೂರು ಎಸಿಪಿ ಮಹೇಶ್ ಕುಮಾರ್, ಸುರತ್ಕಲ್ ಠಾಣಾಧಿಕಾರಿ ಕೆ. ಚಂದ್ರಪ್ಪ, ಖತೀಬ್ ಉಮ್ಮರ್ ಫಾರೂಕು, ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಅಧ್ಯಕ್ಷ ಜಲೀಲ್ ಬದ್ರಿಯಾ ಹಾಗೂ ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು