6:53 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಬಕ್ರೀದ್ ಹಬ್ಬವನ್ನು ಸರಕಾರದ ನಿಯಮಾನುಸಾರ ಆಚರಿಸಿ: ಪೊಲೀಸ್ ಕಮೀಷನರ್ ಶಶಿಕುಮಾರ್

17/07/2021, 20:22

ಸುರತ್ಕಲ್(reporterkarnataka news): ಕೋವಿಡ್ ನ ಮಹಾಮಾರಿಯಿಂದಾಗಿ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು‌. ಆದರೆ ಲಾಕ್ ಡೌನ್ ಸಡಿಲವಾದ ಬಳಿಕ ಎಲ್ಲಕ್ಕೂ ವಿನಾಯಿತಿ ನೀಡಲಾಗಿದೆ. ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸರಕಾರದ ನಿಯಾನುಸಾರ ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಮಸೀದಿಗಳಿಗೂ ಭೇಟಿ ನೀಡಿ ಹೆಚ್ಚು ಜನ ಸೇರದೆ, ಅಗತ್ಯ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸಲು ಮಸೀದಿಯ ಆಡಳಿತ ಮಂಡಳಿಯವರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಮಂಗಳೂರು ಪೊಲೀಸ್  ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. 

ಅವರು ಕೃಷ್ಣಾಪುರ 7ನೇ ವಿಭಾಗದ ಬದ್ರಿಯಾ ಜುಮ್ಮಾ ಮಸೀದಿ, ಕೇಂದ್ರ ಜಮಾತ್ ನಲ್ಲಿ ಆಡಳಿತ ಮಂಡಳಿಯವರಿಗೆ ಸರಕಾರದ ನಿಯಮದ ಕುರಿತು ಮಾಹಿತಿ ನೀಡುತ್ತಾ ಹಬ್ಬದ ಸಂದರ್ಭದಲ್ಲಿ 5೦ ಜನರಿಗಿಂತ ಅಧಿಕ ಜನರು ಸೇರದೇ, ಸಾಮಾಜಿಕ ಅಂತರವನ್ನು ಕಾಪಾಡಬೇಕು.

ಸರಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸತಕ್ಕದ್ದು. ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರದೇ ಎಲ್ಲರೂ ಪಾಲಿಸಬೇಕು.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶಾಂತಿ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸದಾ ಸಿದ್ಧವಾಗಿದೆ‌‌ ಎಂದರು‌. 

ಡಿಸಿಪಿ ಬಿ.ಪಿ ದಿನೇಶ್ ಕುಮಾರ್, ಪಣಂಬೂರು ಎಸಿಪಿ ಮಹೇಶ್ ಕುಮಾರ್, ಸುರತ್ಕಲ್ ಠಾಣಾಧಿಕಾರಿ ಕೆ. ಚಂದ್ರಪ್ಪ, ಖತೀಬ್ ಉಮ್ಮರ್ ಫಾರೂಕು, ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಅಧ್ಯಕ್ಷ ಜಲೀಲ್ ಬದ್ರಿಯಾ ಹಾಗೂ ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು