4:38 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬಕ್ರೀದ್ ಹಬ್ಬವನ್ನು ಸರಕಾರದ ನಿಯಮಾನುಸಾರ ಆಚರಿಸಿ: ಪೊಲೀಸ್ ಕಮೀಷನರ್ ಶಶಿಕುಮಾರ್

17/07/2021, 20:22

ಸುರತ್ಕಲ್(reporterkarnataka news): ಕೋವಿಡ್ ನ ಮಹಾಮಾರಿಯಿಂದಾಗಿ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು‌. ಆದರೆ ಲಾಕ್ ಡೌನ್ ಸಡಿಲವಾದ ಬಳಿಕ ಎಲ್ಲಕ್ಕೂ ವಿನಾಯಿತಿ ನೀಡಲಾಗಿದೆ. ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸರಕಾರದ ನಿಯಾನುಸಾರ ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಮಸೀದಿಗಳಿಗೂ ಭೇಟಿ ನೀಡಿ ಹೆಚ್ಚು ಜನ ಸೇರದೆ, ಅಗತ್ಯ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸಲು ಮಸೀದಿಯ ಆಡಳಿತ ಮಂಡಳಿಯವರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಮಂಗಳೂರು ಪೊಲೀಸ್  ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. 

ಅವರು ಕೃಷ್ಣಾಪುರ 7ನೇ ವಿಭಾಗದ ಬದ್ರಿಯಾ ಜುಮ್ಮಾ ಮಸೀದಿ, ಕೇಂದ್ರ ಜಮಾತ್ ನಲ್ಲಿ ಆಡಳಿತ ಮಂಡಳಿಯವರಿಗೆ ಸರಕಾರದ ನಿಯಮದ ಕುರಿತು ಮಾಹಿತಿ ನೀಡುತ್ತಾ ಹಬ್ಬದ ಸಂದರ್ಭದಲ್ಲಿ 5೦ ಜನರಿಗಿಂತ ಅಧಿಕ ಜನರು ಸೇರದೇ, ಸಾಮಾಜಿಕ ಅಂತರವನ್ನು ಕಾಪಾಡಬೇಕು.

ಸರಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸತಕ್ಕದ್ದು. ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರದೇ ಎಲ್ಲರೂ ಪಾಲಿಸಬೇಕು.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶಾಂತಿ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸದಾ ಸಿದ್ಧವಾಗಿದೆ‌‌ ಎಂದರು‌. 

ಡಿಸಿಪಿ ಬಿ.ಪಿ ದಿನೇಶ್ ಕುಮಾರ್, ಪಣಂಬೂರು ಎಸಿಪಿ ಮಹೇಶ್ ಕುಮಾರ್, ಸುರತ್ಕಲ್ ಠಾಣಾಧಿಕಾರಿ ಕೆ. ಚಂದ್ರಪ್ಪ, ಖತೀಬ್ ಉಮ್ಮರ್ ಫಾರೂಕು, ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಅಧ್ಯಕ್ಷ ಜಲೀಲ್ ಬದ್ರಿಯಾ ಹಾಗೂ ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು