10:51 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬಕ್ರೀದ್ ಸೌಹಾರ್ದತೆ ಸಾರುವ ಹಬ್ಬ: ವಿಧಾನಸಭೆ ಸ್ಪೀಕರ್ ಖಾದರ್

18/06/2024, 17:47

ಉಳ್ಳಾಲ(reporterkarnataka.com): ಬಕ್ರೀದ್ ಸೌಹಾರ್ದತೆಯ ಸಂದೇಶ ಸಾರುತ್ತದೆ. ಈ ಹಬ್ಬ ಆಚರಿಸುವ ಜೊತೆಗೆ ಸಹೋದರತೆಯನ್ನು ಬೆಳೆಸಬೇಕು. ಪರಸ್ಪರ ಸಂಸ್ಕೃತಿ, ಸೌಹಾರ್ದತೆಯನ್ನು ಹಂಚುವ ಮೂಲಕ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಬಕ್ರೀದ್ ಹಬ್ಬದ ಪ್ರಯುಕ್ತ ಗುರುವಾರ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಝಿಯಾರತ್ ನಡೆಸಿದ ಬಳಿಕ ಮಾಧ್ಯಮದ ಜೊತೆ ಅವರು ಮಾತನಾಡಿದರು.
ಬಕ್ರಿದ್ ಹಬ್ಬವನ್ನು ಸಹೋದರತೆ ಸಾಮರಸ್ಯ ಪ್ರೀತಿ ಮಾನವೀಯತೆ ಸಾಮರಸ್ಯದ ಹಬ್ಬವಾಗಿ ಸರ್ವ ಧರ್ಮೀಯರ ಜತೆಗೂಡಿ ಆಚರಿಸುತ್ತಿದ್ದೇವೆ. ಸಮೃದ್ಧ ಭಾರತ, ನಾಡಿನೆಲ್ಲೆಡೆ ಶಾಂತಿಯುತ ವಾತಾವರಣ, ಭವಿಷ್ಯದ ಜನಾಂಗ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಂಡು ಬಾಳಲಿ ಎಂದು ಆಶಿಸಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ, ಪ್ರವಾದಿ ಇಬ್ರಾಹಿಂ ಅವರ ಕಾಲದಲ್ಲಿ ನಡೆದ ಘಟನೆಯನ್ನು ನೆನಪಿಸುವಂತಹ ಹಬ್ಬ ಬಕ್ರೀದ್ ಆಗಿದೆ. ಇಡೀ ಜಗತ್ತಿನ ಮುಸ್ಲಿಮರು ಪವಿತ್ರವಾದ ಈ ಹಬ್ಬ ಆಚರಿಸುತ್ತಿದ್ದು ತ್ಯಾಗ ಬಲಿದಾನದ ಸಂಕೇತವಾಗಿದೆ. ಪ್ರವಾದಿ ಇಬ್ರಾಹಿಂ, ಪ್ರವಾದಿ ಇಸ್ಮಾಯಿಲ್ ಅವರ ಆದರ್ಶವನ್ನು ಜಗತ್ತಿನ ಎಲ್ಲ ಮುಸ್ಲಿಮರು ಪಾಲಿಸುತ್ತಾ ಬರುತ್ತಾರೆ ಎಂದು ಹೇಳಿದರು.
ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಖತೀಬ್ ಇಬ್ರಾಹಿಂ ಸಅದಿ ನಮಾಝ್ ಮತ್ತು ಕುತುಬ ನೆರವೇರಿಸಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್ ಮುಕ್ಕಚೇರಿ, ಜತೆ ಕಾರ್ಯದರ್ಶಿ ಮುಸ್ತಫ ಮದನಿ ನಗರ, ಸಮಿತಿ ಸದಸ್ಯರಾದ ಝೈನಾಕ ಮೇಲಂಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು