1:19 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು