11:46 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು