10:40 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು