8:16 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು