6:29 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು