7:03 AM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು